ಬೆಂಗಳೂರು : ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ರಾಸಲೀಲೆ ಸಿಡಿ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದ್ರೇ ತಮಗೆ ಅನಾರೋಗ್ಯವಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂಬುದಾಗಿ ತಮ್ಮ ವಕೀಲ ಶ್ಯಾಮ್ ಸುಂದರ್ ಮೂಲಕ ಪತ್ರವನ್ನು ಎಸ್ಐಟಿ ಅಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ತಲುಪಿಸಿರುವುದಾಗಿ ತಿಳಿದು ಬಂದಿದೆ.
ಈ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ವಕೀಲ ಶ್ಯಾಮ್ ಸುಂದರ್ ಅವರಿಗೆ ಪತ್ರ ನೀಡಿರುವಂತ ಅವರು, ತಮಗೆ ಅನಾರೋಗ್ಯವಿದೆ. ಹೀಗಾಗಿ ಇಂದು ಎಸ್ಐಟಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಮುಂದಿನ ದಿನಾಂಕದಂದು ವಿಚಾರಣೆಗೆ ಕರೆದ್ರೆ ಹಾಜರಾಗುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
NEWS DESK
TIMES OF BENGALURU